ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
Cross references
ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.