ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
Cross references
ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.