ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ