ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
Cross references
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.