Home Bibles ಯೋಹಾನ 1:17 · ಕನ್ನಡ ಬೈಬಲ್
ಯೋಹಾನ 1:17 · ಕನ್ನಡ ಬೈಬಲ್

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

Cross references

ಆದಿಕಾಂಡ 3:15

ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಆದಿಕಾಂಡ 22:18

ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.

ನಿರ್ಗಮಕಾಂಡ 20:1

ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--

ದ್ವಿತೀಯೋಪದೇಶಕಾಂಡ 4:44

ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--

ದ್ವಿತೀಯೋಪದೇಶಕಾಂಡ 5:1

ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.

ದ್ವಿತೀಯೋಪದೇಶಕಾಂಡ 33:4

ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.

ಕೀರ್ತನೆಗಳು 85:10

ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.

ಕೀರ್ತನೆಗಳು 89:1

ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.

ಕೀರ್ತನೆಗಳು 98:3

ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.

ಮೀಕ 7:20

ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

ಲೂಕ 1:54

ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.

ಲೂಕ 1:68

ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.

ಯೋಹಾನ 1:14

ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

ಯೋಹಾನ 5:45

ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.

ಯೋಹಾನ 7:19

ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.

ಯೋಹಾನ 8:32

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.

ಯೋಹಾನ 9:29

ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಅಪೋಸ್ತಲರ ಕೃತ್ಯಗಳು 7:38

ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಅಪೋಸ್ತಲರ ಕೃತ್ಯಗಳು 13:34

ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.

ಅಪೋಸ್ತಲರ ಕೃತ್ಯಗಳು 28:23

ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 6:14

ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

2 ಕೊರಿಂಥದವರಿಗೆ 1:20

ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್‌ ಆಗಿವೆ.

2 ಕೊರಿಂಥದವರಿಗೆ 3:7

ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಗಲಾತ್ಯದವರಿಗೆ 3:17

ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.

ಹೆಬ್ರಿಯರಿಗೆ 3:5

ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.

ಹೆಬ್ರಿಯರಿಗೆ 8:8

ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.

ಹೆಬ್ರಿಯರಿಗೆ 9:22

ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.

ಹೆಬ್ರಿಯರಿಗೆ 10:4

ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

ಹೆಬ್ರಿಯರಿಗೆ 11:39

ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.

ಪ್ರಕಟನೆ 5:8

ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

ಪ್ರಕಟನೆ 7:9

ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ

Interlinear

Choose Theme