ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
ಮೋಶೆಯು ಇಸ್ರಾಯೇಲ್ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವನ್ನು ಹೊಂದಲಿಲ್ಲ;ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ದೇವರು ನಮಗೋಸ್ಕರ ಶ್ರೇಷ್ಠ ವಾದದ್ದನ್ನು ಏರ್ಪಡಿಸಿದ್ದನು.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ