ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
Cross references
ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.