ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
Cross references
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ--
ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.