ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
Cross references
ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.