ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
Cross references
ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.
ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.