ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
Cross references
ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ
ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.