Cross references
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.