ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
Cross references
ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.