ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.