ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Cross references
ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.
ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.