ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
Cross references
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.
ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.