ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
Cross references
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ