ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
Cross references
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.