ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
Cross references
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು.
ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ