ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
Cross references
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;