ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
Cross references
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.