ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
Cross references
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.
ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.