ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
Cross references
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.