ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
Cross references
ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.