ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
Cross references
ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.