ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
Cross references
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ