ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
Cross references
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.