ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
Cross references
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು.
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.