ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
Cross references
ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ.
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.