Cross references
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ಆತನು ನಿಜವಾಗಿಯೂ ದೂತರ ಸ್ವಭಾವವನ್ನು ಧರಿಸಿಕೊಳ್ಳದೆ ಅಬ್ರಹಾಮನ ಸಂತತಿಯ ಸ್ವಭಾವವನ್ನು ಧರಿಸಿಕೊಂಡನು.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.