ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
Cross references
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.