ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
Cross references
ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.