ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
Cross references
ನ್ಯಾಯದ ಎದೆಪದಕದಲ್ಲಿ ಊರೀಮ್ ತುವ್ಮೆಾಮ್ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.
ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.