ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
Cross references
ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು.
ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.