ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
Cross references
ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.