ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
Cross references
ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.