ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
Cross references
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.