ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
Cross references
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.