ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.