ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
Cross references
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.