Home Bibles ಯೋಹಾನ 12:48 · ಕನ್ನಡ ಬೈಬಲ್
ಯೋಹಾನ 12:48 · ಕನ್ನಡ ಬೈಬಲ್

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

Cross references

ದ್ವಿತೀಯೋಪದೇಶಕಾಂಡ 18:18

ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

1 ಸಮುವೇಲ 8:7

ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.

1 ಸಮುವೇಲ 10:19

ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.

ಯೆಶಾಯ 53:3

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಮತ್ತಾಯ 21:42

ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮತ್ತಾಯ 25:31

ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 12:10

ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಮಾರ್ಕ 16:16

ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಲೂಕ 7:30

ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ಲೂಕ 9:22

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕ 9:26

ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.

ಲೂಕ 10:16

ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

ಲೂಕ 17:25

ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.

ಲೂಕ 20:17

ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?

ಯೋಹಾನ 3:17

ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.

ಯೋಹಾನ 5:45

ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.

ಯೋಹಾನ 11:24

ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.

ಅಪೋಸ್ತಲರ ಕೃತ್ಯಗಳು 3:23

ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.

ರೋಮಾಪುರದವರಿಗೆ 2:16

ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

2 ಕೊರಿಂಥದವರಿಗೆ 2:15

ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.

2 ಕೊರಿಂಥದವರಿಗೆ 4:3

ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

2 ತೆಸಲೋನಿಕದವರಿಗೆ 1:8

ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಹೆಬ್ರಿಯರಿಗೆ 9:27

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೆಬ್ರಿಯರಿಗೆ 10:29

ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

Interlinear

Choose Theme