ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
Cross references
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು.
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.
ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.
ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು