ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.
Cross references
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.