ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
Cross references
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.