ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
Cross references
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.