Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.