ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
Cross references
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.