Home Bibles ಯೋಹಾನ 15:2 · ಕನ್ನಡ ಬೈಬಲ್
ಯೋಹಾನ 15:2 · ಕನ್ನಡ ಬೈಬಲ್

ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.

Cross references

ಯೋಬ 17:9

ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

ಸಾಮೇತಿಗಳು 4:18

ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.

ಯೆಶಾಯ 27:9

ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.

ಯೆಶಾಯ 29:19

ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

ಹೊಶೇಯ 6:3

ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

ಮಲಾಕಿ 3:3

ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

ಮತ್ತಾಯ 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯ 3:12

ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯ 13:12

ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.

ಮತ್ತಾಯ 13:33

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.

ಮತ್ತಾಯ 15:13

ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.

ಮತ್ತಾಯ 21:19

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಲೂಕ 8:13

ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

ಲೂಕ 13:7

ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

ಯೋಹಾನ 15:8

ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

ಯೋಹಾನ 15:16

ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

ಯೋಹಾನ 17:12

ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ರೋಮಾಪುರದವರಿಗೆ 5:3

ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ

ರೋಮಾಪುರದವರಿಗೆ 8:28

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

1 ಕೊರಿಂಥದವರಿಗೆ 13:1

ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

2 ಕೊರಿಂಥದವರಿಗೆ 4:17

ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಫಿಲಿಪ್ಪಿಯವರಿಗೆ 1:9

ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

ಕೊಲೊಸ್ಸೆಯವರಿಗೆ 1:5

ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.

1 ತೆಸಲೋನಿಕದವರಿಗೆ 5:23

ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಹೆಬ್ರಿಯರಿಗೆ 6:7

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

ಹೆಬ್ರಿಯರಿಗೆ 12:10

ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

ಹೆಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

1 ಯೋಹಾನ 2:19

ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

ಪ್ರಕಟನೆ 3:19

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

Interlinear

Choose Theme