Home Bibles ಯೋಹಾನ 15:6 · ಕನ್ನಡ ಬೈಬಲ್
ಯೋಹಾನ 15:6 · ಕನ್ನಡ ಬೈಬಲ್

ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

Cross references

2 ಸಮುವೇಲ 23:7

ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.

ಯೋಬ 15:30

ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.

ಕೀರ್ತನೆಗಳು 80:15

ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.

ಯೆಶಾಯ 14:19

ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.

ಯೆಶಾಯ 27:10

ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.

ಯೆಹೆಜ್ಕೇಲ 15:3

ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಯೆಹೆಜ್ಕೇಲ 17:9

ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.

ಯೆಹೆಜ್ಕೇಲ 19:12

ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.

ಮತ್ತಾಯ 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯ 7:19

ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.

ಮತ್ತಾಯ 13:41

ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

ಮತ್ತಾಯ 27:5

ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

ಯೋಹಾನ 15:2

ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.

ಹೆಬ್ರಿಯರಿಗೆ 6:7

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

ಹೆಬ್ರಿಯರಿಗೆ 10:27

ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.

2 ಪೇತ್ರ 2:20

ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

1 ಯೋಹಾನ 2:19

ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

ಯೂದ 1:12

ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

ಪ್ರಕಟನೆ 20:15

ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Interlinear

Choose Theme