ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
Cross references
ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.